LKG UKG School: ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಬಿಸಿಯೂಟ, ಮೊಟ್ಟೆ, ಹಾಲು, ಬಾಳೆಹಣ್ಣು; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

Telegram Group Join Now
WhatsApp Group Join Now

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿರುವ ಪೂರ್ವ ಪ್ರಾಥಮಿಕ (ಎಲ್‌ಕೆಜಿ ಮತ್ತು ಯುಕೆಜಿ) ತರಗತಿಗಳಲ್ಲಿ ಓದುತ್ತಿರುವ ಪುಟ್ಟ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಈ ಮಕ್ಕಳಿಗೂ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯದ ಬಿಸಿಹಾಲು ಮತ್ತು ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.

ದಿನಾಂಕ 29.11.2025 ರಂದು ಹೊರಡಿಸಲಾದ ಸರ್ಕಾರಿ ಆದೇಶದನ್ವಯ, 2025-26ನೇ ಸಾಲಿನಿಂದಲೇ ಅಂದರೆ ಡಿಸೆಂಬರ್ 01, 2025 ರಿಂದ ಈ ಯೋಜನೆ ಜಾರಿಗೆ ಬರಲಿದ್ದು, ಮಕ್ಕಳಿಗೆ ಈ ಸೌಲಭ್ಯ ಸಿಗಲಿದೆ.

ಯೋಜನೆಯ ಮುಖ್ಯಾಂಶಗಳು:

  • ಫಲಾನುಭವಿಗಳು: ಕರ್ನಾಟಕ ಪಬ್ಲಿಕ್ ಶಾಲೆಗಳು, ಪಿ.ಎಂ ಶ್ರೀ ಶಾಲೆಗಳು, ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳು ಸೇರಿದಂತೆ ವಿವಿಧ ಯೋಜನೆಗಳಡಿ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳು ಈ ಯೋಜನೆಯ ಫಲಾನುಭವಿಗಳು.
  • ಏನೇನು ಸಿಗಲಿದೆ?:
    • ಬಿಸಿಯೂಟ: ವಾರದಲ್ಲಿ 6 ದಿನ ಮಧ್ಯಾಹ್ನದ ಬಿಸಿಯೂಟ
    • ಬಿಸಿಹಾಲು: ವಾರದಲ್ಲಿ 5 ದಿನ ಕ್ಷೀರಭಾಗ್ಯ ಯೋಜನೆಯಡಿ ಹಾಲು ವಿತರಣೆ.
    • ಮೊಟ್ಟೆ/ಬಾಳೆಹಣ್ಣು: ವಾರದಲ್ಲಿ 2 ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣು (ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಉಳಿದ 4 ದಿನಗಳಿಗೂ ನೀಡಲಾಗುವುದು).
  • ಅಡುಗೆ ವೆಚ್ಚ: ಪೂರ್ವ ಪ್ರಾಥಮಿಕ ಮಗುವಿಗೆ ದಿನಕ್ಕೆ ಅಡುಗೆ ತಯಾರಿಕಾ ವೆಚ್ಚವಾಗಿ ₹6.78 (ಕೇಂದ್ರದ ಪಾಲು ₹4.07 + ರಾಜ್ಯದ ಪಾಲು ₹2.71) ನಿಗದಿಪಡಿಸಲಾಗಿದೆ.

ಅಡುಗೆ ಸಿಬ್ಬಂದಿಗೆ ವೇತನ: ಪೂರ್ವ ಪ್ರಾಥಮಿಕ ತರಗತಿಗಳಿಗೆ ನೇಮಕಗೊಳ್ಳುವ ಹೆಚ್ಚುವರಿ ಅಡುಗೆ ಸಹಾಯಕರ ಗೌರವ ಸಂಭಾವನೆಯನ್ನು ಮಾಸಿಕ ₹4,600/- ಎಂದು ನಿಗದಿಪಡಿಸಲಾಗಿದೆ. ಇದರಲ್ಲಿ ಕೇಂದ್ರದ ಪಾಲು ₹600, ರಾಜ್ಯದ ಪಾಲು ₹400 ಮತ್ತು ರಾಜ್ಯದಿಂದ ಹೆಚ್ಚುವರಿ ಮೊತ್ತ ₹3600 ಸೇರಿದೆ.

ಮಕ್ಕಳ ಹಾಜರಾತಿಯನ್ನು ಕಡ್ಡಾಯವಾಗಿ SATS ತಂತ್ರಾಂಶದಲ್ಲಿ ದಾಖಲಿಸಲು ಮತ್ತು ಆಧಾರ್ ಸೀಡಿಂಗ್ ಮಾಡಲು ಮುಖ್ಯ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.

ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment