ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣಕ್ಕಾಗಿ ಕಾಯುತ್ತಿದ್ದ ರಾಜ್ಯದ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಬಾಕಿ ಉಳಿದಿರುವ ಕಂತಿನ ಹಣ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಹೊಸ ವರ್ಷಕ್ಕೂ ಮುನ್ನವೇ ಮಹಿಳೆಯರ ಕೈಸೇರಲಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹಣ ಬಿಡುಗಡೆ ಮತ್ತು ಅನರ್ಹರ ಖಾತೆಗಳಿಗೆ ಕಡಿವಾಣ ಹಾಕುವ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡರು.
GruhaLakshmi Scheme Amount News:
- ಡಿ.27 ರೊಳಗೆ ಹಣ ಜಮೆ: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಮುಂದಿನ ವಾರ, ಅಂದರೆ ಸೋಮವಾರದಿಂದ ಶನಿವಾರದ ಒಳಗಾಗಿ (ಡಿಸೆಂಬರ್ 27ರ ಒಳಗೆ) ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಸಚಿವರು ಖಚಿತಪಡಿಸಿದ್ದಾರೆ.
- ಮೃತರ ಖಾತೆಗೆ ಬ್ರೇಕ್: ಮೃತಪಟ್ಟ ಮಹಿಳೆಯರ ಖಾತೆಗಳಿಗೂ (Deceased Accounts) ಹಣ ಜಮೆಯಾಗುತ್ತಿರುವ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಹೊಸ ಸಾಫ್ಟ್ವೇರ್ ಅಳವಡಿಸಲಾಗಿದ್ದು, ಇನ್ಮುಂದೆ ಮೃತರ ಖಾತೆಗಳಿಗೆ ಹಣ ಹೋಗುವುದಿಲ್ಲ.
- ಮನೆ ಮನೆ ಪರಿಶೀಲನೆ: ಮರಣ ಪ್ರಮಾಣ ಪತ್ರಗಳನ್ನು ಪರಿಶೀಲಿಸಲು ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮೃತರ ಖಾತೆಗೆ ತಪ್ಪಾಗಿ ಜಮೆಯಾಗಿರುವ ಹಣವನ್ನು ವಾಪಸ್ ಪಡೆಯಲು ಬ್ಯಾಂಕ್ಗಳಿಗೆ ಸೂಚನೆ ನೀಡಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು (CS) ಬ್ಯಾಂಕ್ಗಳಿಗೆ ನೋಟಿಸ್ ನೀಡಿದ್ದಾರೆ.
ಸಚಿವರು ಹೇಳಿದ್ದೇನು? “ಹಣಕಾಸು ಇಲಾಖೆಯ ಅನುಮೋದನೆ ಸಿಕ್ಕಿದೆ. ಮುಂದಿನ ವಾರ ಖಂಡಿತವಾಗಿಯೂ ಹಣ ಬಿಡುಗಡೆಯಾಗುತ್ತದೆ. ಮೃತರ ಖಾತೆಗೆ ಹಣ ಹೋಗುವುದನ್ನು ತಡೆಯಲು ಸಿಎಸ್ ನೇತೃತ್ವದಲ್ಲಿ ಎರಡು ಬಾರಿ ಸಭೆ ನಡೆಸಿದ್ದು, ತಾಂತ್ರಿಕವಾಗಿ ಸಾಫ್ಟ್ವೇರ್ ಅಪ್ಡೇಟ್ ಮಾಡಲಾಗಿದೆ,” ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ನೀವು ಗೃಹಲಕ್ಷ್ಮಿ ಫಲಾನುಭವಿಯಾಗಿದ್ದರೆ, ಮುಂದಿನ ವಾರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿಕೊಳ್ಳಿ.
ಇತರೆ ಮಾಹಿತಿಗಳನ್ನು ಓದಿ: