ಮನೆ ಕಟ್ಟುವವರಿಗೆ ಸಿಹಿಸುದ್ದಿ: ವಸತಿ ಯೋಜನೆ ಸಹಾಯಧನ 4 ಲಕ್ಷ ರೂ.ಗೆ ಏರಿಕೆ? ಸಚಿವರಿಂದ ಮಹತ್ವದ ಹೇಳಿಕೆ

Telegram Group Join Now
WhatsApp Group Join Now

ಬೆಳಗಾವಿ: ಬಡವರ ಸೂರು ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಬಸವ ವಸತಿ ಯೋಜನೆ’ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಬಂಪರ್ ಸುದ್ದಿಯೊಂದನ್ನು ನೀಡುವ ಸಾಧ್ಯತೆ ಇದೆ. ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನವನ್ನು (Subsidy) 3 ರಿಂದ 4 ಲಕ್ಷ ರೂಪಾಯಿಗಳಿಗೆ ಹೆಚ್ಚಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಲಿಖಿತ ಉತ್ತರ ನೀಡುವ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಸಹಾಯಧನ ಹೆಚ್ಚಳಕ್ಕೆ ಕಾರಣವೇನು? ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣಕ್ಕೆ ಬೇಕಾಗುವ ಕಚ್ಚಾ ವಸ್ತುಗಳಾದ ಸಿಮೆಂಟ್, ಕಬ್ಬಿ, ಇಟ್ಟಿಗೆ ಮತ್ತು ಕಾರ್ಮಿಕರ ವೆಚ್ಚ ವಿಪರೀತವಾಗಿ ಏರಿಕೆಯಾಗಿದೆ. ಇದರಿಂದಾಗಿ, ಸರ್ಕಾರ ಈಗ ನೀಡುತ್ತಿರುವ ಸಹಾಯಧನದಲ್ಲಿ ಮನೆ ಕಾಮಗಾರಿ ಪೂರ್ಣಗೊಳಿಸಲು ಬಡವರಿಗೆ ಸಾಧ್ಯವಾಗುತ್ತಿಲ್ಲ. ಈ ವಾಸ್ತವ ಅಂಶ ಸರ್ಕಾರದ ಗಮನಕ್ಕೆ ಬಂದಿದ್ದು, ಇದನ್ನು ಪರಿಹರಿಸಲು ಸಹಾಯಧನವನ್ನು ಕನಿಷ್ಠ 3 ರಿಂದ 4 ಲಕ್ಷ ರೂ.ಗಳಿಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ಮುಂಬರುವ ಬಜೆಟ್‌ನಲ್ಲಿ ಘೋಷಣೆ? ಸಹಾಯಧನ ಹೆಚ್ಚಳದ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಬರುವ ರಾಜ್ಯ ಬಜೆಟ್‌ನಲ್ಲಿ (Budget) ಈ ಅನುದಾನ ಹೆಚ್ಚಳದ ವಿಷಯವನ್ನು ಪರಿಗಣಿಸುವ ಭರವಸೆ ಸಿಕ್ಕಿದ್ದು, ಅಂತಿಮ ತೀರ್ಮಾನದ ನಿರೀಕ್ಷೆಯಲ್ಲಿದ್ದೇವೆ ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ.

ಅಕ್ಟೋಬರ್ ಅಂತ್ಯಕ್ಕೆ ₹1324 ಕೋಟಿ ಬಿಡುಗಡೆ: ಇದೇ ವೇಳೆ ವಸತಿ ಇಲಾಖೆಯ ಪ್ರಗತಿಯ ಬಗ್ಗೆ ಮಾಹಿತಿ ನೀಡಿದ ಸಚಿವರು, “2025-26ನೇ ಸಾಲಿನಲ್ಲಿ ಅಕ್ಟೋಬರ್ ಅಂತ್ಯದವರೆಗೆ ರಾಜ್ಯದ ವಿವಿಧ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಒಟ್ಟು ₹1324.26 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ,” ಎಂದು ಸದನಕ್ಕೆ ಮಾಹಿತಿ ನೀಡಿದರು.

ಒಟ್ಟಿನಲ್ಲಿ, ಬೆಲೆ ಏರಿಕೆಯಿಂದ ಅರ್ಧಕ್ಕೆ ನಿಂತಿರುವ ಮನೆಗಳಿಗೆ ಈ ನಿರ್ಧಾರ ಜೀವ ತುಂಬಲಿದ್ದು, ಬಜೆಟ್‌ನಲ್ಲಿ ಅಧಿಕೃತ ಘೋಷಣೆಯಾಗುವುದನ್ನು ಫಲಾನುಭವಿಗಳು ಎದುರು ನೋಡುತ್ತಿದ್ದಾರೆ.

ರೈತರ ಪಂಪ್‌ಸೆಟ್‌ಗೆ 80% ಸಬ್ಸಿಡಿ! ಅರ್ಜಿ ಆಹ್ವಾನ; ಅಪ್ಲೈ ಮಾಡುವುದು ಹೇಗೆ?

ಮಹಿಳೆಯರಿಗೆ ಗುಡ್‌ನ್ಯೂಸ್: 1.5 ಲಕ್ಷ ರೂ. ಸಹಾಯಧನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment