Indira Kit Scheme: ಬಿಪಿಎಲ್ ಕಾರ್ಡ್‌ದಾರರೇ ಸಿಹಿ ಸುದ್ದಿ: ಅಕ್ಕಿ ಬದಲು ಬರಲಿದೆ ‘ಇಂದಿರಾ ಕಿಟ್’; ಎಣ್ಣೆ, ಬೇಳೆ, ಸಕ್ಕರೆ ಉಚಿತ!

Telegram Group Join Now
WhatsApp Group Join Now

ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಅನ್ನಭಾಗ್ಯ ಯೋಜನೆಯಡಿ ಇದುವರೆಗೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ, ಇನ್ಮುಂದೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನೊಳಗೊಂಡ ‘ಇಂದಿರಾ ಕಿಟ್’ (Indira Kit Scheme) ನೀಡಲು ಸರ್ಕಾರ ನಿರ್ಧರಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಈ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದು, “ಜನರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಅಕ್ಕಿಯ ಸದುಪಯೋಗಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಪಡಿತರ ಅಂಗಡಿಗಳ ಮೂಲಕ ಈ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಗುತ್ತಿದೆ,” ಎಂದು ತಿಳಿಸಿದ್ದಾರೆ.

Indira Kit Scheme ಯಾವಾಗಲಿಂದ ಜಾರಿ?

ಸಚಿವರು ನೀಡಿರುವ ಮಾಹಿತಿಯ ಪ್ರಕಾರ, ಇದೇ ಜನವರಿ ತಿಂಗಳ ಅಂತ್ಯದಿಂದ ಅಥವಾ ಫೆಬ್ರವರಿ ತಿಂಗಳಿಂದ ಈ ಹೊಸ ಕಿಟ್ ವಿತರಣೆ ಆರಂಭವಾಗುವ ಸಾಧ್ಯತೆ ಇದೆ.

ಏನಿದು ‘ಇಂದಿರಾ ಕಿಟ್’?:

ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳಿರುವ ‘ಇಂದಿರಾ ಕಿಟ್’ ನೀಡಲು ಸರ್ಕಾರ ನಿರ್ಧರಿಸಿದೆ.

  • ಕಿಟ್‌ನಲ್ಲಿ ಏನಿರುತ್ತೆ?: ತೊಗರಿ ಬೇಳೆ 1 ಕೆ.ಜಿ, ಹೆಸರು ಕಾಳು 1 ಕೆ.ಜಿ, ಸಕ್ಕರೆ 1 ಕೆ.ಜಿ, ಅಡುಗೆ ಎಣ್ಣೆ 1 ಲೀಟರ್ ಮತ್ತು ಉಪ್ಪು 1 ಕೆ.ಜಿ.
  • ಯಾವಾಗಲಿಂದ?: ಜನವರಿ ಅಂತ್ಯ ಅಥವಾ ಫೆಬ್ರವರಿ ತಿಂಗಳಿಂದ ವಿತರಣೆ ಆರಂಭವಾಗುವ ಸಾಧ್ಯತೆ ಇದೆ.
  • ಯಾರಿಗೆ ಲಾಭ?: ರಾಜ್ಯದ ಸುಮಾರು 1.5 ಲಕ್ಷ ಕಾರ್ಡ್‌ಗಳ ವ್ಯಾಪ್ತಿಯಲ್ಲಿರುವ 4.50 ಕೋಟಿ ಜನರಿಗೆ ಇದರಿಂದ ಅನುಕೂಲವಾಗಲಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಇಂದಿರಾ ಕಿಟ್ ವಿತರಣೆ
  • ಉದ್ದೇಶ: ಜನರ ಆರೋಗ್ಯ ದೃಷ್ಟಿಯಿಂದ ಮತ್ತು ಅಕ್ಕಿಯ ಸದುಪಯೋಗಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಪಡಿತರ ಅಂಗಡಿಗಳ ಮೂಲಕ ಪೌಷ್ಟಿಕ ಆಹಾರ ನೀಡಲಾಗುತ್ತಿದೆ.

ಬಜೆಟ್ ಲೆಕ್ಕಾಚಾರ ಮತ್ತು ಲಾಭ:

ಈ ಹಿಂದೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಬಜೆಟ್‌ನಲ್ಲಿ ₹6,426 ಕೋಟಿ ಅನುದಾನ ಮೀಸಲಿಡಲಾಗಿತ್ತು. ಇದೀಗ ಅಕ್ಕಿಯ ಬದಲಾಗಿ ಕಿಟ್ ನೀಡುತ್ತಿರುವುದರಿಂದ, ಇದರಲ್ಲಿ ₹6,119.52 ಕೋಟಿ ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರು ಹಂಚಿಕೆ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ರಾಜ್ಯದ ಸುಮಾರು 1.5 ಲಕ್ಷಕ್ಕೂ ಅಧಿಕ (ಅಂದಾಜು) ಕಾರ್ಡ್‌ಗಳ ವ್ಯಾಪ್ತಿಯಲ್ಲಿರುವ ಬರೋಬ್ಬರಿ 4.50 ಕೋಟಿ ಜನರಿಗೆ ನೇರ ಲಾಭವಾಗಲಿದೆ.

ರೈತರಿಗೂ ಅನುಕೂಲ:

ಇದೇ ವೇಳೆ ಮಾತನಾಡಿದ ಸಚಿವರು, “ತೊಗರಿ ಕಣಜ ಎಂದೇ ಕರೆಯಲ್ಪಡುವ ಕಲಬುರಗಿ ಭಾಗದ ಸ್ಥಳೀಯ ರೈತರಿಂದಲೇ ಕಿಟ್‌ಗೆ ಅಗತ್ಯವಿರುವ ತೊಗರಿ ಬೇಳೆಯನ್ನು ಖರೀದಿಸಲು ಆದ್ಯತೆ ನೀಡುವಂತೆ ಸಚಿವ ಶರಣಪ್ರಕಾಶ ಪಾಟೀಲ್ ಸಲಹೆ ನೀಡಿದ್ದಾರೆ. ರೈತರ ಹಿತದೃಷ್ಟಿಯಿಂದ ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು,” ಎಂದು ಭರವಸೆ ನೀಡಿದರು.

ಒಟ್ಟಿನಲ್ಲಿ, ಕೇವಲ ಕಾರ್ಬೋಹೈಡ್ರೇಟ್ ಇರುವ ಅಕ್ಕಿಯ ಬದಲಿಗೆ, ಪ್ರೋಟೀನ್ ಯುಕ್ತ ಬೇಳೆಕಾಳು ಮತ್ತು ಎಣ್ಣೆ ಸಿಗುತ್ತಿರುವುದು ಬಡವರ ಪಾಲಿಗೆ ನಿಜಕ್ಕೂ ವರದಾನವಾಗಲಿದೆ.

ರೈತರಿಗೆ ಮೇವಿನ ಕಿರು ಪೊಟ್ಟಣಗಳ ವಿತರಣೆ

ಕುರಿ ಸಾಕಾಣಿಕೆಗೆ ಸರ್ಕಾರದಿಂದ ₹1.75 ಲಕ್ಷ ರೂ.: ₹43,750 ಉಚಿತ ಸಹಾಯಧನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment