ಎಲ್ಲರಿಗೂ ನಮಸ್ಕಾರ, ರೈತರಿಗೆ ಗುಡ್ ನ್ಯೂಸ್, ತೋಟಗಾರಿಕೆ ಇಲಾಖೆ ವತಿಯಿಂದ 2025-26 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲೂಕಿನ ರೈತರು ತಮ್ಮ ಜಮೀನುಗಳಿಗೆ ಹನಿ ನೀರಾವರಿ ಸೌಲಭ್ಯವನ್ನು ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ಶೇಕಡಾ 90 ಸಹಾಯಧನ ಲಭ್ಯವಿರುತ್ತದೆ. ಆಸಕ್ತರು ಇಂದೆ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
2018-19 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಈ ಹಿಂದೆ ಹನಿ ನೀರಾವರಿ ಘಟಕ ಅಳವಡಿಸಿಕೊಂಡವರ ಘಟಕ ಹಾಳಾಗಿದ್ದರೆ ಅಂತಹ ರೈತರು ಮತ್ತೊಮ್ಮೆ ಹೊಸದಾಗಿ ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ರೈತರಿಗೂ ಪುನಃ ಶೇಕಡಾ 90 ರಷ್ಟು ಸಹಾಯಧನ ಇಲಾಖೆಯು ನೀಡುತ್ತದೆ.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ಅಂಜನಾಪುರ-8861994178
ತಾಳಗುಂದ – 7975515575
ಕಸಬಾ-9113812090
ಉಡುಗಣಿ – 9108548454
ಹೊಸೂರು – 6363095898
ಇತರೆ ಮಾಹಿತಿಗಳನ್ನು ಓದಿ:
ಉಚಿತ ಹೊಲಿಗೆ ಯಂತ್ರ ಯೋಜನೆ 2025; ಅರ್ಹರಿಂದ ಆನ್ಲೈನ್ ಅರ್ಜಿ ಆಹ್ವಾನ