Ration Card Amendment 2026: ರೇಷನ್ ಕಾರ್ಡ್ ತಿದ್ದುಪಡಿ ಆರಂಭ; ದಿನಾಂಕ, ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು?

Telegram Group Join Now
WhatsApp Group Join Now

ಪಡಿತರ ಚೀಟಿಯಲ್ಲಿ (Ration Card) ಹೆಸರು ಸೇರ್ಪಡೆ, ಅಳಿಸುವಿಕೆ ಹಾಗೂ ವಿಳಾಸ ಬದಲಾವಣೆ ಮಾಡಲು ತಿಂಗಳುಗಳಿಂದ ಕಾಯುತ್ತಿದ್ದ ರಾಜ್ಯದ ಜನತೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಇಂದಿನಿಂದಲೇ (ಮೇ 8, 2026) ಆನ್‌ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಕುಟುಂಬಕ್ಕೆ ಹೊಸದಾಗಿ ಬಂದ ಸೊಸೆ, ನವಜಾತ ಶಿಶುವಿನ ಹೆಸರು ಸೇರ್ಪಡೆ ಮಾಡಲು ಹಾಗೂ ಮರಣ ಹೊಂದಿದವರ ಹೆಸರನ್ನು ಕಾರ್ಡ್‌ನಿಂದ ತೆಗೆದುಹಾಕಲು ಸಾರ್ವಜನಿಕರು ಬಹಳ ದಿನಗಳಿಂದ ಕಾಯುತ್ತಿದ್ದರು.

ಇದೀಗ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (ಆಹಾರ ಪೋರ್ಟಲ್) ತಿದ್ದುಪಡಿಗೆ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಸುದೀರ್ಘ ಕಾಲಾವಕಾಶವನ್ನು ನೀಡಲಾಗಿದೆ.

ಸಂಕ್ಷಿಪ್ತ ವಿವರ:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-05-2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 31-03-2027
  • ಹೊಸ ರೇಷನ್ ಕಾರ್ಡ್: ಸದ್ಯಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ
  • ಅರ್ಜಿ ಸಲ್ಲಿಸುವ ಸ್ಥಳ: ಗ್ರಾಮ ಒನ್ (Grama One), ಕರ್ನಾಟಕ ಒನ್ (Karnataka One) ಮತ್ತು ಬೆಂಗಳೂರು ಒನ್ (Bangalore One) ಕೇಂದ್ರಗಳು ಮಾತ್ರ.

ಮೊಬೈಲ್‌ನಲ್ಲಿ ಅರ್ಜಿ ಸಲ್ಲಿಸಲು ಬರುವುದಿಲ್ಲ!: ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಆಹಾರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಮುಖ ಎಚ್ಚರಿಕೆಯೊಂದನ್ನು ನೀಡಲಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್, ಮನೆ ಅಥವಾ ಸೈಬರ್ ಸೆಂಟರ್‌ಗಳ ಮೂಲಕ ನೇರವಾಗಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.

“ಈ ಸೇವೆಯು ಕೇವಲ ಫೋಟೋ-ಬಯೋ ಸೆಂಟರ್‌ಗಳಾದ (Photo Bio Center) ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಮಾತ್ರ ಲಭ್ಯವಿದೆ” ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ತಿದ್ದುಪಡಿ ಮಾಡಿಸುವವರು ಕಡ್ಡಾಯವಾಗಿ ಈ ಅಧಿಕೃತ ಕೇಂದ್ರಗಳಿಗೆ ಭೇಟಿ ನೀಡಬೇಕು.

ಹೊಸ ರೇಷನ್ ಕಾರ್ಡ್‌ಗೆ ಅವಕಾಶವಿಲ್ಲ: ಬಿಪಿಎಲ್ (BPL) ಹಾಗೂ ಎಪಿಎಲ್ (APL) ಕಾರ್ಡ್‌ಗಳ ತಿದ್ದುಪಡಿಗೆ ಮಾತ್ರ ಪೋರ್ಟಲ್ ತೆರೆಯಲಾಗಿದ್ದು, “ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶ ನೀಡಿರುವುದಿಲ್ಲ”. ಹೊಸ ಕಾರ್ಡ್ ನಿರೀಕ್ಷೆಯಲ್ಲಿದ್ದವರು ಸರ್ಕಾರದ ಮುಂದಿನ ಆದೇಶದವರೆಗೆ ಕಾಯಬೇಕಿದೆ.

ಬೇಕಾಗುವ ಪ್ರಮುಖ ದಾಖಲೆಗಳು:

  • ಮೂಲ ರೇಷನ್ ಕಾರ್ಡ್ ಪ್ರತಿ
  • ಹೆಸರು ಸೇರಿಸಬೇಕಾದವರ ಆಧಾರ್ ಕಾರ್ಡ್ (Aadhaar Card) ಕಡ್ಡಾಯ
  • 5 ವರ್ಷದೊಳಗಿನ ಮಕ್ಕಳಾಗಿದ್ದರೆ ಜನನ ಪ್ರಮಾಣಪತ್ರ (Birth Certificate) ಹಾಗೂ ಆಧಾರ್
  • ಮದುವೆಯಾಗಿ ಬಂದ ಸೊಸೆಯ ಹೆಸರು ಸೇರಿಸಲು – ಹಳೇ ರೇಷನ್ ಕಾರ್ಡ್‌ನಿಂದ ಹೆಸರು ಕಡಿತಗೊಳಿಸಿದ ಪ್ರಮಾಣಪತ್ರ (NOC) ಹಾಗೂ ಆಧಾರ್ ಕಾರ್ಡ್
  • ಮರಣ ಹೊಂದಿದವರ ಹೆಸರು ತೆಗೆಯಲು – ಮರಣ ಪ್ರಮಾಣಪತ್ರ (Death Certificate)
  • ತಿದ್ದುಪಡಿ ಮಾಡುವಾಗ ಕುಟುಂಬದ ಮುಖ್ಯಸ್ಥರ ಬಯೋಮೆಟ್ರಿಕ್ (ಬೆರಳಚ್ಚು) ಕಡ್ಡಾಯವಾಗಿರುತ್ತದೆ.

ಪ್ರಮುಖ ಲಿಂಕ್‌ಗಳು:

ಲೇಬರ್ ಕಾರ್ಡ್ ಇದ್ದವರಿಗೆ ₹60,000 ಉಚಿತ ಸಹಾಯಧನ

ಕರ್ನಾಟಕದಲ್ಲಿ ಇಂದಿನ ಬಂಗಾರದ ದರ ಎಷ್ಟು?

ಅನ್ನಭಾಗ್ಯ ಯೋಜನೆ: ಫಲಾನುಭವಿಗಳಿಗೆ ಅಕ್ಕಿ ಜತೆ ರಾಗಿ, ಜೋಳ ವಿತರಣೆ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment