Simple Marriage Scheme: ಮದುವೆಯಾದ ಹೊಸ ಜೋಡಿಗಳಿಗೆ ಸರ್ಕಾರದಿಂದ ಸಿಗಲಿದೆ ₹50,000 ಪ್ರೋತ್ಸಾಹಧನ!

Telegram Group Join Now
WhatsApp Group Join Now

ಬೆಂಗಳೂರು: ಮದುವೆಯಾಗುವ ಕನಸು ಕಾಣುತ್ತಿರುವ, ಆರ್ಥಿಕವಾಗಿ ಹಿಂದುಳಿದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸರಳ ಸಾಮೂಹಿಕ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ₹50,000 ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ‘ಸರಳ ಸಾಮೂಹಿಕ ವಿವಾಹ ನೆರವು ಯೋಜನೆ’ಯಡಿ (Simple Marriage Scheme) ಈ ಸೌಲಭ್ಯ ದೊರೆಯಲಿದ್ದು, ಅರ್ಹರು ಇದರ ಲಾಭ ಪಡೆಯಬಹುದಾಗಿದೆ.

ಯೋಜನೆಯ ಲಾಭವೇನು? ಈ ಯೋಜನೆಯಡಿ ನಡೆಯುವ ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ಪ್ರತಿ ಜೋಡಿಗೆ ಸರ್ಕಾರದಿಂದ ₹50,000 ಆರ್ಥಿಕ ನೆರವು ನೀಡಲಾಗುತ್ತದೆ.

Simple Marriage Scheme ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  1. ಸಮುದಾಯ: ವಧು ಮತ್ತು ವರ ಇಬ್ಬರೂ ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಅಥವಾ ಪಾರ್ಸಿ) ಸೇರಿದವರಾಗಿರಬೇಕು.
  2. ವಯಸ್ಸಿನ ಮಿತಿ:
    • ವಧು: ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು 42 ವರ್ಷ ಮೀರಿರಬಾರದು.
    • ವರ: ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು 45 ವರ್ಷ ಮೀರಿರಬಾರದು.
  3. ಆದಾಯ ಮಿತಿ: ವಧು-ವರರ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷದ ಒಳಗಿರಬೇಕು.
  4. ನಿಯಮಗಳು:
    • ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಿರಬೇಕು.
    • ಒಂದು ಕುಟುಂಬದಿಂದ ಒಬ್ಬರಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.
    • ವಧು ಅಥವಾ ವರನಿಗೆ ಈಗಾಗಲೇ ಜೀವಂತ ಪತಿ/ಪತ್ನಿ ಇದ್ದರೆ ಈ ಯೋಜನೆ ಅನ್ವಯಿಸುವುದಿಲ್ಲ (ಮೊದಲ ಮದುವೆಗೆ ಆದ್ಯತೆ).

ಸಂಪರ್ಕಿಸಬೇಕಾದ ವಿವರಗಳು: ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಸುವ ಕುರಿತು ಗೊಂದಲಗಳಿದ್ದರೆ ಇಲಾಖೆಯ ಸಹಾಯವಾಣಿಗೆ ಕರೆ ಮಾಡಬಹುದು.

  • ಸಹಾಯವಾಣಿ ಸಂಖ್ಯೆ: 090-22864212
  • ಇಮೇಲ್: directorgokdom@gmail.com

ಅರ್ಹ ಫಲಾನುಭವಿಗಳು ಕೂಡಲೇ ಇಲಾಖೆಯ ವೆಬ್‌ಸೈಟ್‌ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ, ಸರ್ಕಾರದ ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಿ.

ಇದೇ ರೀತಿ ಬೇರೆ ಸಮೂದಾಯದ ಸರಳ ಸಾಮೂಹಿಕ ವಿವಾಹ ನೆರವು ಯೋಜನೆಯ ಬಗ್ಗೆ ಕೂಡ ಮಾಹಿತಿ ನೀಡಲಾಗುವುದು.

ಕಾರ್ಮಿಕರ ಮಕ್ಕಳಿಗೆ 20,000 ರೂ. ವಿದ್ಯಾರ್ಥಿವೇತನ; ಅರ್ಜಿ ಆಹ್ವಾನ

ಸ್ವಂತ ವಾಹನ ಖರೀದಿಸಲು 3 ಲಕ್ಷ ರೂ. ಸಹಾಯಧನ

Telegram Group Join Now
WhatsApp Group Join Now
Written By Verified Author
Manjunath Pujari - Founder & Editor-in-Chief of KannadaSiri.in

Manjunath Pujari

Founder & Editor-in-Chief, Hosamahiti.com

10+ Years Exp
Belagavi Working Place
6,000+ Articles

ಮಂಜುನಾಥ ಪೂಜಾರಿ, ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ 10 ಕ್ಕೂ ಹೆಚ್ಚು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವ. ವಿವಿಧ ವೆಬ್‌ಸೈಟ್‌ಗಳಲ್ಲಿ ಸರ್ಕಾರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ವಿದ್ಯಾರ್ಥಿವೇತನ, ತಂತ್ರಜ್ಞಾನ, ಆಟೋಮೊಬೈಲ್, ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸಂಕೀರ್ಣ ಮಾಹಿತಿಗಳನ್ನು ಕನ್ನಡ ಓದುಗರಿಗೆ ಸರಳವಾಗಿ ಅರ್ಥವಾಗುವಂತೆ ಸುದ್ದಿಯನ್ನು ಬರೆಯುತ್ತಾರೆ.

Leave a Comment